22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya
error: Content is protected !!