25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!