23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!