July 23, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಸೆ.14-21: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇಲೈಸಲಿದೆ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
error: Content is protected !!