September 6, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya
error: Content is protected !!