July 23, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya
error: Content is protected !!