ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದ ಜಮೀನಿಗೆ ಎದುರಾಗಿರುವ ಆತಂಕದ ಕುರಿತಾಗಿ ಮತ್ತು ಇದನ್ನು ಸರಿಪಡಿಸುವ ಯತ್ನಗಳ ಬಗ್ಗೆ ಸಮಾನ ಮನಸ್ಕರು ಸೇರಿ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ಅ.24ರಂದು ಕೊಕ್ಕಡ ಅಪೇಕ್ಷಾ ಸಭಾಂಗಣದಲ್ಲಿ ನಡೆಯಿತು.

ಮುಂದಿನ ಪ್ರಯತ್ನಗಳಿಗೆ ಹೋರಾಟ ವೇದಿಕೆಯೊಂದನ್ನು ರಚಿಸಲು ತೀರ್ಮಾನವಾಗಿ “ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ” ಎಂಬ ಹೆಸರಿನಲ್ಲಿ ವೇದಿಕೆ ರಚಿಸಿ ಶ್ರೀ ಕ್ಷೇತ್ರದ ಜಮೀನು ಉಳಿಸಿಕೊಳ್ಳುವ ಸಲುವಾಗಿ ಸದ್ರಿ ವೇದಿಕೆ ಮೂಲಕ ಸರಕಾರವನ್ನು ಸಂಪರ್ಕಿಸುವುದು, ಧರಣಿ, ಕಾನೂನು ಹೋರಾಟ, ಆಂದೋಲನಗಳನ್ನು ಕೈಗೊಳ್ಳುವ ಬಗ್ಗೆ ಹಾಗೂ ನವೆಂಬರ್ 5ರಂದು ಮಂಗಳೂರಿನಲ್ಲಿ ವೇದಿಕೆಯ ಪತ್ರಿಕಾಗೋಷ್ಟಿ ನಡೆಸುವುದು. ನವೆಂಬರ್ 11 ರಿಂದ ಸೌತಡ್ಕ ಕ್ಷೇತ್ರದಲ್ಲಿ ಅನಿರ್ಧಿಷ್ಟ ಧರಣಿ ಪ್ರಾರಂಭಿಸಲು ತೀರ್ಮಾನವಾಯಿತು.

ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ, ಉಪಾಧ್ಯಕ್ಷರುಗಳಾಗಿ ಶ್ರೀಕೃಷ್ಣ ಭಟ್ ಕುಡ್ತಲಾಜೆ, ಪ್ರಶಾಂತ ರೈ ಗೋಳಿತೊಟ್ಟು, ವಿಶ್ವನಾಥ ಶೆಟ್ಟಿ ನೆಲ್ಯಾಡಿ, ತುಕ್ರಪ್ಪ ಶೆಟ್ಟಿ ನೂಜಿ, ಮೋಹನ ರೈ ಕುಂಟಾಲಪಲ್ಕೆ. ಕಾರ್ಯದರ್ಶಿಯಾಗಿ ಶ್ಯಾಮರಾಜ್ ಪಟ್ರಮೆ, ಸುನೀಶ್ ನಾಯ್ಕ್, ಗಣೇಶ್ ಕಾಶಿ, ಹರಿಶ್ಚಂದ್ರ ಜೋಡುಮಾರ್ಗ, ದಯಾನೀಶ್ ಕೊಕ್ಕಡ, ಕೋಶಾಧಿಕಾರಿಯಾಗಿ ವಿಶ್ವನಾಥ ಕೊಲ್ಲಾಜೆ. ಸದಸ್ಯರುಗಳಾಗಿ ಲಕ್ಷ್ಮೀನಾರಾಯಣ ಉಪಾರ್ಣ, ಗೋಪಾಲಕೃಷ್ಣ ಭಟ್ ಮುನ್ನಡ್ಕ, ಎ.ಎನ್ ಶಬರಾಯ, ಪದ್ಮನಾಭ ಆಚಾರ್ಯ, ಚರಣ್ ಕೊಕ್ಕಡ, ಗಣೇಶ್.ಪಿ.ಕೆ, ಧನಂಜಯ ಪಟ್ರಮೆ, ಕೃಷ್ಣಪ್ಪ ಗೌಡ, ಪೂವಾಜೆ, ಧರ್ಮರಾಜ್ ಅಡ್ಕರಿ, ಜಯಂತ ಗೌಡ ಮಾಸ್ತಿಕಲ್ಲು, ಜಾರಪ್ಪ ಗೌಡ ಸಂಕೇಶ, ಲಕ್ಷ್ಮೀನಾರಯಣ, ವಿಶ್ವನಾಥ ಮೀಯಾಳ, ಗಣೇಶ ಪೂಜಾರಿ, ಶೀನ ನಾಯ್ಕ, ಸಲಹೆಗಾರರಾಗಿ ಬಿ.ಯಂ.ಭಟ್, ಪ್ರಶಾಂತ್, ವೆಂಕಟ್ರಮಣ ಡೆಂಜ ಅವರನ್ನು ವೇದಿಕೆಗೆ ಆಯ್ಕೆ ಮಾಡಲಾಯಿತು.

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya
error: Content is protected !!