July 23, 2026
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!