September 6, 2026
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!