September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
error: Content is protected !!