25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya
error: Content is protected !!