23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!