September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಯರ್ಡೂರು ನಾಗಬನದಲ್ಲಿ ನಾಗರಪಂಚಮಿ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya
error: Content is protected !!