September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಎಸ್.ಪಿ.ವೈ.ಎಸ್.ಎಸ್. ಹವ್ಯಕ ಭವನ ಶಾಖೆಯಲ್ಲಿ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ಎಂಬ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ ನೆರವೇರಿತು.


ಸಂಸ್ಕಾರ, ಸಂಘಟನೆ, ಸೇವೆ ಎಂಬ ಧ್ಯೇಯದೊಂದಿಗೆ ಕರುಣಾಮಯಿ, ತ್ಯಾಗ ಮೂರ್ತಿ ಅಮ್ಮನ ಮಹತ್ವದ ಕುರಿತು ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ ಸಂಯೋಜಕ ಜಯರಾಮ ಅವರು ಪ್ರಧಾನ ಭಾಷಣಕಾರರಾಗಿ ಆಗಮಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಮಾತೃ ಮಂಡಳಿ ಹಾಗೂ ಹವ್ಯಕ ಭವನ ಮಾತೃ ಮಂಡಳಿಯ ಅಧ್ಯಕ್ಷೆ ದೇವಿಕಾ ಶಾಸ್ತ್ರಿ ಆಗಮಿಸಿ, ಮಕ್ಕಳಿಗೆ ತಾಯಂದಿರು ಬಾಲ್ಯದಿಂದಲೇ ಸಂಸ್ಕಾರದ ಪಾಠ ಕಲಿಸಬೇಕು ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.


ಗಾಣಿಗರ ಸಮುದಾಯ ಭವನದ ಶಾಖೆಯ ಯೋಗ ಶಿಕ್ಷಕಿ ಆಶಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಯೋಗ ತರಗತಿಯ ಬಂಧುಗಳು ತಾವು ಮನೆಯಲ್ಲಿ ಪ್ರಸಾದ ರೂಪದಲ್ಲಿ ತಯಾರಿಸಿ ತಂದ ವಿವಿಧ ತಿನಿಸುಗಳನ್ನು ಮಾತೆಯರು ಎಲ್ಲರಿಗೂ ನೀಡುವ ಮೂಲಕ ಮಾತೃಭೋಜನ ಕಾರ್ಯಕ್ರಮ ನಡೆಸಿಕೊಟ್ಟರು.


ಯೋಗ ಬಂಧುಗಳು ತರಗತಿಯಲ್ಲಿ ಪಡೆದ ಪ್ರಯೋಗಗಳ ಬಗ್ಗೆ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ತಾಯಿಯ ಮಹತ್ವವನ್ನು ಅರ್ಥೈಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ತಾಲೂಕು ಸಂಚಾಲಕ ಸಂತೋಷ್ ಹಾಗು ವಿವಿಧ ಶಾಖೆಗಳ ಶಿಕ್ಷಕರು, ಹಾಗೂ 190 ಮಂದಿ ಯೋಗ ಹಾಗೂ ಯೋಗೇತರ ಬಂಧುಗಳು ಪಾಲ್ಗೊಂಡಿದ್ದರು.


ಯೋಗ ಶಿಕ್ಷಕರಾದ ಪ್ರದೀಪ್, ಆನಂದ್ ಹಾಗು ಪ್ರೇಮಲತಾ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಯೋಜಿಸಲಾಗಿತ್ತು.
ದಯಾನಂದ ವಂದೇಮಾತರಂ ಗೀತೆ ಹಾಡಿದರು. ಬ್ರಾಹ್ಮೀ ಅವರು ವೈಯುಕ್ತಿಕ ಗೀತೆ ಹಾಡಿದರು. ದಮಯಂತಿ ಸ್ವಾಗತಿಸಿ, ಪೂರ್ಣಿಮಾ ವರದಿ ವಾಚಿಸಿದರು. ಜಯಂತಿ ಏಕನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Related posts

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya
error: Content is protected !!