30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಕಾಪುವಿನಲ್ಲಿ ನಡೆದ 2024ನೇ ಸಾಲಿನ ವಲಯ ಸಮ್ಮೇಳನ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಜೆಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ 2024 ನೇ ಸಾಲಿನ ಅತ್ಯುತಮ ಘಟಕಾಧ್ಯಕ್ಷ ಪ್ರಶಸ್ತಿಗೆ ಭಾಜನರಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 47ನೇ ಘಟಕಾಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಪ್ರಸ್ತಕ ವರ್ಷದಲ್ಲಿ ಹಲವಾರು ತರಬೇತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕು ಹಾಗೂ ಜೆಸಿಐಯ ವಲಯ 15ರಲ್ಲಿ ಜೆಸಿಐ ಬೆಳ್ತಂಗಡಿಯನ್ನು ಮಿಂಚುವಂತೆ ಮಾಡಿದರು.

ವಲಯ 15ರ ವಲಯಾಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ ಯವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂರ್ವ ವಲಯಾಧ್ಯಕ್ಷರಾದ ಸಂಪತ್ ಬಿ ಸುವರ್ಣ, ವಲಯ ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಪೂರ್ವಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಅಭಿನಂದನ್ ಹರೀಶ್ ಕುಮಾರ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿಗಳಾದ ಅನುದೀಪ್ ಜೈನ, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

Related posts

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya
error: Content is protected !!