July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya
error: Content is protected !!