April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya
error: Content is protected !!