24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya
error: Content is protected !!