September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!