September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 2024-25 ನೇ ಸಾಲಿನ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭವು ಶಾಲಾ ಸಂಚಾಲಕರಾದ ವ| ಫಾ| ಅಬೆಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು.

ಶಾಲಾ ಪ್ರಾಂಶುಪಾಲರಾದ ವ| ಫಾ| ವಿಜಯ್ ಲೋಬೊ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಾಂಕೇತಿಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಜೊತೆಗೆ ಸನ್ಮಾನಿತರೂ ಆಗಿರುವ ಫಾ| ಆಸ್ಮೊಂಡ್ ಡಿಸೋಜ ಅವರು ವಿಜ್ಞಾನದ ಮಾದರಿಗಳನ್ನು ಮಾಡುವುದರ ಜೊತೆಗೆ ಮಕ್ಕಳು ಕುತೂಹಲದಿಂದ ಕಲಿಕೆಯಲ್ಲೂ ಭಾಗವಹಿಸುತ್ತಿದ್ದಾರೆ ಎಂಬ ಮಾತು ಹೇಳಿದರು.

ಶಾಲಾ ಸಂಚಾಲಕರು ಅಧ್ಯಕ್ಷೀಯ ಭಾಷಣ ಮಾಡುತ್ತಾ ದೇವರು ಭೂಮಿಯನ್ನು ಸೃಷ್ಟಿಸಿದಾಗ ಕೆಲವೊಂದು ಅದ್ಭುತಗಳನ್ನು ಸೃಷ್ಟಿಸಿದ್ದಾನೆ ಅದನ್ನು ಹುಡುಕುವ ಪ್ರಯತ್ನವನ್ನು ಮಾಡಬೇಕು ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಪ್ರತಿಮಾ ಕಾರ್‍ಯಕ್ರಮಕ್ಕೆ ಶುಭ ಕೋರಿದರು. ಕಾರ್‍ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಸ್ಟಾನಿ ಪಿಂಟೋ ಹಾಗೂ ಅನಿತಾ ಮೋನಿಸ್ ಉಪಸ್ಥಿತರಿದ್ದರು.

ಮಕ್ಕಳ ಪ್ರಾರ್ಥನೆಯ ನಂತರ ವಿದ್ಯಾರ್ಥಿನಿ ಶಾರೋನ್ ಸ್ವಾಗತಿಸಿದರು. ಸಹಶಿಕ್ಷಕಿ ವಿನಯಲತಾ ಕಾರ್ಯಕ್ರಮವನ್ನು ನಿರೂಪಿಸಿ ವಿದ್ಯಾರ್ಥಿನಿ ರೀಮ್ ಇವರು ಧನ್ಯವಾದವನ್ನಿತ್ತರು. ಇದಾದ ಬಳಿಕ ವಸ್ತುಪ್ರದರ್ಶನ ವೀಕ್ಷಣೆಯ ನಡೆಯಿತು. ಸ್ಥಳೀಯ ಹಲವು ಶಾಲೆಗಳ ಮಕ್ಕಳು ವಸ್ತು ಪ್ರದರ್ಶನನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!