23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಬಂಟರ ಸಂಘದ ಸಮಾಲೋಚನಾ ಸಭೆ ಹಾಗೂ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಅ. 27 ರಂದು ಓಡಿಲ್ನಾಳ ಕುಂಡಳಿಕೆ ವಿಠಲ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು.


ಮುಖ್ಯ ಅತಿಥಿ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಮಾತನಾಡಿ ನಮ್ಮ ಬಂಟ ಸಮುದಾಯದ ಪ್ರತಿಯೊಂದು ಮನೆಯ ಸದಸ್ಯರು ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಬಂಟ ಸಮುದಾಯದ ಯುವ ಪೀಳಿಗೆಗೆ ಉತ್ತಮ ವಿದ್ಯೆ, ಸಂಸ್ಕೃತಿ, ಸಂಸ್ಕಾರಗಳ, ಆಚರಣೆ ಬಗ್ಗೆ ಪೋಷಕರು ತಿಳಿಸಿ ಕೊಡುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ಹೇಳಿದರು.


ಓಡಿಲ್ನಾಳ ಬಂಟರ ಸಂಘದ ಸ್ಥಾಪಕ ಮಾಜಿ ಅಧ್ಯಕ್ಷ ಬಾಲಕೃಷ್ಣ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಸುರೇಶ್ ಶೆಟ್ಟಿ ಲಾಯಿಲ, ನವೀನ್ ಸಾಮಾನಿ ಕರಂಬಾರು, ಜಯರಾಮ ಭಂಡಾರಿ, ಸೀತಾರಾಮ ಶೆಟ್ಟಿ ಕಂಬರ್ಜೆ, ಕಿರಣ್ ಶೆಟ್ಟಿ, ರಾಜು ಶೆಟ್ಟಿ ಬೆಂಗತ್ಯಾರು, ಅಜಿತ್ ಜಿ. ಶೆಟ್ಟಿ ಕೊರಿಯಾರು ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.

ಈ ವೇಳೆ ನೂತನ ಸಮಿತಿ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಸಂಬೋಳ್ಯ, ಕಾರ್ಯದರ್ಶಿ ಪುರಂದರ ಶೆಟ್ಟಿ. ಮುಂಗೇಲು, ಕೋಶಾಧಿಕಾರಿ ಅಭಿರತ್ ಶೆಟ್ಟಿ ಮುಡೈಲು, ಮಹಿಳಾ ಸಂಘದ ಉಪಾಧ್ಯಕ್ಷೆ ರಂಜಿತಾ ವಿ. ಶೆಟ್ಟಿ. ಮೈರಳಿಕೆ, ಕಾರ್ಯದರ್ಶಿ ವನಿತಾ ಜೆ.ಶೆಟ್ಟಿ ಅವರು ನೂತನ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದರು.

ಪ್ರಭಾಕರ ಶೆಟ್ಟಿ ಉಪ್ಪಡ್ಕ ಪ್ಕಸ್ತಾವಿಕವಾಗಿ ಮಾತನಾಡಿದರು. ಸಹ ಸಂಚಾಲಕ ಸತೀಶ್ ಶೆಟ್ಟಿ ಕುಂಇ್ ಲೊಟ್ಟು, ನಿಕಟ ಪೂರ್ವ ಅಧ್ಯಕ್ಷ ವಸಂತ ಶೆಟ್ಟಿ ಮಠ, ಬೆಳ್ತಂಗಡಿ ಬಂಟರ ಸಂಘದ ಪದಾಧಿಕಾರಿಗಳು ಹಾಗೂ ಓಡಿಲ್ನಾಳ ಬಂಟ ಸಮುದಾಯದ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕು.ಮಿಥಿಲ, ಕು.ನಿವೇದಿತಾ, ಕು.ಕೃತಿಕಾ ಪ್ರಾರ್ಥನೆ ಹಾಡಿದರು. ಆನಂದ ಶೆಟ್ಟಿ ಐಸಿರಿ ಸ್ವಾಗತಿಸಿದರು. ವಿಠ್ಠಲ ಶೆಟ್ಟಿ ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya
error: Content is protected !!