27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಎಸ್.ಪಿ.ವೈ.ಎಸ್.ಎಸ್. ಹವ್ಯಕ ಭವನ ಶಾಖೆಯಲ್ಲಿ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ಎಂಬ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ ನೆರವೇರಿತು.


ಸಂಸ್ಕಾರ, ಸಂಘಟನೆ, ಸೇವೆ ಎಂಬ ಧ್ಯೇಯದೊಂದಿಗೆ ಕರುಣಾಮಯಿ, ತ್ಯಾಗ ಮೂರ್ತಿ ಅಮ್ಮನ ಮಹತ್ವದ ಕುರಿತು ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ ಸಂಯೋಜಕ ಜಯರಾಮ ಅವರು ಪ್ರಧಾನ ಭಾಷಣಕಾರರಾಗಿ ಆಗಮಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಮಾತೃ ಮಂಡಳಿ ಹಾಗೂ ಹವ್ಯಕ ಭವನ ಮಾತೃ ಮಂಡಳಿಯ ಅಧ್ಯಕ್ಷೆ ದೇವಿಕಾ ಶಾಸ್ತ್ರಿ ಆಗಮಿಸಿ, ಮಕ್ಕಳಿಗೆ ತಾಯಂದಿರು ಬಾಲ್ಯದಿಂದಲೇ ಸಂಸ್ಕಾರದ ಪಾಠ ಕಲಿಸಬೇಕು ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.


ಗಾಣಿಗರ ಸಮುದಾಯ ಭವನದ ಶಾಖೆಯ ಯೋಗ ಶಿಕ್ಷಕಿ ಆಶಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಯೋಗ ತರಗತಿಯ ಬಂಧುಗಳು ತಾವು ಮನೆಯಲ್ಲಿ ಪ್ರಸಾದ ರೂಪದಲ್ಲಿ ತಯಾರಿಸಿ ತಂದ ವಿವಿಧ ತಿನಿಸುಗಳನ್ನು ಮಾತೆಯರು ಎಲ್ಲರಿಗೂ ನೀಡುವ ಮೂಲಕ ಮಾತೃಭೋಜನ ಕಾರ್ಯಕ್ರಮ ನಡೆಸಿಕೊಟ್ಟರು.


ಯೋಗ ಬಂಧುಗಳು ತರಗತಿಯಲ್ಲಿ ಪಡೆದ ಪ್ರಯೋಗಗಳ ಬಗ್ಗೆ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ತಾಯಿಯ ಮಹತ್ವವನ್ನು ಅರ್ಥೈಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ತಾಲೂಕು ಸಂಚಾಲಕ ಸಂತೋಷ್ ಹಾಗು ವಿವಿಧ ಶಾಖೆಗಳ ಶಿಕ್ಷಕರು, ಹಾಗೂ 190 ಮಂದಿ ಯೋಗ ಹಾಗೂ ಯೋಗೇತರ ಬಂಧುಗಳು ಪಾಲ್ಗೊಂಡಿದ್ದರು.


ಯೋಗ ಶಿಕ್ಷಕರಾದ ಪ್ರದೀಪ್, ಆನಂದ್ ಹಾಗು ಪ್ರೇಮಲತಾ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಯೋಜಿಸಲಾಗಿತ್ತು.
ದಯಾನಂದ ವಂದೇಮಾತರಂ ಗೀತೆ ಹಾಡಿದರು. ಬ್ರಾಹ್ಮೀ ಅವರು ವೈಯುಕ್ತಿಕ ಗೀತೆ ಹಾಡಿದರು. ದಮಯಂತಿ ಸ್ವಾಗತಿಸಿ, ಪೂರ್ಣಿಮಾ ವರದಿ ವಾಚಿಸಿದರು. ಜಯಂತಿ ಏಕನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Related posts

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
error: Content is protected !!