April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಎಸ್.ಪಿ.ವೈ.ಎಸ್.ಎಸ್. ಹವ್ಯಕ ಭವನ ಶಾಖೆಯಲ್ಲಿ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ಎಂಬ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ ನೆರವೇರಿತು.


ಸಂಸ್ಕಾರ, ಸಂಘಟನೆ, ಸೇವೆ ಎಂಬ ಧ್ಯೇಯದೊಂದಿಗೆ ಕರುಣಾಮಯಿ, ತ್ಯಾಗ ಮೂರ್ತಿ ಅಮ್ಮನ ಮಹತ್ವದ ಕುರಿತು ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ ಸಂಯೋಜಕ ಜಯರಾಮ ಅವರು ಪ್ರಧಾನ ಭಾಷಣಕಾರರಾಗಿ ಆಗಮಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಮಾತೃ ಮಂಡಳಿ ಹಾಗೂ ಹವ್ಯಕ ಭವನ ಮಾತೃ ಮಂಡಳಿಯ ಅಧ್ಯಕ್ಷೆ ದೇವಿಕಾ ಶಾಸ್ತ್ರಿ ಆಗಮಿಸಿ, ಮಕ್ಕಳಿಗೆ ತಾಯಂದಿರು ಬಾಲ್ಯದಿಂದಲೇ ಸಂಸ್ಕಾರದ ಪಾಠ ಕಲಿಸಬೇಕು ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.


ಗಾಣಿಗರ ಸಮುದಾಯ ಭವನದ ಶಾಖೆಯ ಯೋಗ ಶಿಕ್ಷಕಿ ಆಶಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಯೋಗ ತರಗತಿಯ ಬಂಧುಗಳು ತಾವು ಮನೆಯಲ್ಲಿ ಪ್ರಸಾದ ರೂಪದಲ್ಲಿ ತಯಾರಿಸಿ ತಂದ ವಿವಿಧ ತಿನಿಸುಗಳನ್ನು ಮಾತೆಯರು ಎಲ್ಲರಿಗೂ ನೀಡುವ ಮೂಲಕ ಮಾತೃಭೋಜನ ಕಾರ್ಯಕ್ರಮ ನಡೆಸಿಕೊಟ್ಟರು.


ಯೋಗ ಬಂಧುಗಳು ತರಗತಿಯಲ್ಲಿ ಪಡೆದ ಪ್ರಯೋಗಗಳ ಬಗ್ಗೆ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ತಾಯಿಯ ಮಹತ್ವವನ್ನು ಅರ್ಥೈಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ತಾಲೂಕು ಸಂಚಾಲಕ ಸಂತೋಷ್ ಹಾಗು ವಿವಿಧ ಶಾಖೆಗಳ ಶಿಕ್ಷಕರು, ಹಾಗೂ 190 ಮಂದಿ ಯೋಗ ಹಾಗೂ ಯೋಗೇತರ ಬಂಧುಗಳು ಪಾಲ್ಗೊಂಡಿದ್ದರು.


ಯೋಗ ಶಿಕ್ಷಕರಾದ ಪ್ರದೀಪ್, ಆನಂದ್ ಹಾಗು ಪ್ರೇಮಲತಾ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಯೋಜಿಸಲಾಗಿತ್ತು.
ದಯಾನಂದ ವಂದೇಮಾತರಂ ಗೀತೆ ಹಾಡಿದರು. ಬ್ರಾಹ್ಮೀ ಅವರು ವೈಯುಕ್ತಿಕ ಗೀತೆ ಹಾಡಿದರು. ದಮಯಂತಿ ಸ್ವಾಗತಿಸಿ, ಪೂರ್ಣಿಮಾ ವರದಿ ವಾಚಿಸಿದರು. ಜಯಂತಿ ಏಕನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Related posts

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!