25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಎಸ್.ಪಿ.ವೈ.ಎಸ್.ಎಸ್. ಹವ್ಯಕ ಭವನ ಶಾಖೆಯಲ್ಲಿ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ಎಂಬ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ ನೆರವೇರಿತು.


ಸಂಸ್ಕಾರ, ಸಂಘಟನೆ, ಸೇವೆ ಎಂಬ ಧ್ಯೇಯದೊಂದಿಗೆ ಕರುಣಾಮಯಿ, ತ್ಯಾಗ ಮೂರ್ತಿ ಅಮ್ಮನ ಮಹತ್ವದ ಕುರಿತು ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ ಸಂಯೋಜಕ ಜಯರಾಮ ಅವರು ಪ್ರಧಾನ ಭಾಷಣಕಾರರಾಗಿ ಆಗಮಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಮಾತೃ ಮಂಡಳಿ ಹಾಗೂ ಹವ್ಯಕ ಭವನ ಮಾತೃ ಮಂಡಳಿಯ ಅಧ್ಯಕ್ಷೆ ದೇವಿಕಾ ಶಾಸ್ತ್ರಿ ಆಗಮಿಸಿ, ಮಕ್ಕಳಿಗೆ ತಾಯಂದಿರು ಬಾಲ್ಯದಿಂದಲೇ ಸಂಸ್ಕಾರದ ಪಾಠ ಕಲಿಸಬೇಕು ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.


ಗಾಣಿಗರ ಸಮುದಾಯ ಭವನದ ಶಾಖೆಯ ಯೋಗ ಶಿಕ್ಷಕಿ ಆಶಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಯೋಗ ತರಗತಿಯ ಬಂಧುಗಳು ತಾವು ಮನೆಯಲ್ಲಿ ಪ್ರಸಾದ ರೂಪದಲ್ಲಿ ತಯಾರಿಸಿ ತಂದ ವಿವಿಧ ತಿನಿಸುಗಳನ್ನು ಮಾತೆಯರು ಎಲ್ಲರಿಗೂ ನೀಡುವ ಮೂಲಕ ಮಾತೃಭೋಜನ ಕಾರ್ಯಕ್ರಮ ನಡೆಸಿಕೊಟ್ಟರು.


ಯೋಗ ಬಂಧುಗಳು ತರಗತಿಯಲ್ಲಿ ಪಡೆದ ಪ್ರಯೋಗಗಳ ಬಗ್ಗೆ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ತಾಯಿಯ ಮಹತ್ವವನ್ನು ಅರ್ಥೈಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ತಾಲೂಕು ಸಂಚಾಲಕ ಸಂತೋಷ್ ಹಾಗು ವಿವಿಧ ಶಾಖೆಗಳ ಶಿಕ್ಷಕರು, ಹಾಗೂ 190 ಮಂದಿ ಯೋಗ ಹಾಗೂ ಯೋಗೇತರ ಬಂಧುಗಳು ಪಾಲ್ಗೊಂಡಿದ್ದರು.


ಯೋಗ ಶಿಕ್ಷಕರಾದ ಪ್ರದೀಪ್, ಆನಂದ್ ಹಾಗು ಪ್ರೇಮಲತಾ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಯೋಜಿಸಲಾಗಿತ್ತು.
ದಯಾನಂದ ವಂದೇಮಾತರಂ ಗೀತೆ ಹಾಡಿದರು. ಬ್ರಾಹ್ಮೀ ಅವರು ವೈಯುಕ್ತಿಕ ಗೀತೆ ಹಾಡಿದರು. ದಮಯಂತಿ ಸ್ವಾಗತಿಸಿ, ಪೂರ್ಣಿಮಾ ವರದಿ ವಾಚಿಸಿದರು. ಜಯಂತಿ ಏಕನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Related posts

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya
error: Content is protected !!