22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ-15 ರ 2025 ನೇ ಸಾಲಿನ ನೂತನ ವಲಯ ಉಪಾಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ, ಮೈಟ್ ಇಂಜಿನಿಯರಿಂಗ್ ಕಾಲೇಜಿನ‌ ಅಸಿಸ್ಟೆಂಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಬಳಂಜ ಅವರು ಆಯ್ಕೆಯಾದರು.

ಕಾಪುವಿನಲ್ಲಿ ನಡೆದ ವಲಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಈ ವರ್ಷ ಅದ್ಬುತ ಕಾರ್ಯಕ್ರಮಗಳ ಆಯೋಜನೆ ಮೂಲಕ ವಲಯದಲ್ಲಿಯೇ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ರಂಜಿತ್ ಅವರು ತನ್ನದಾಗಿಸಿಕೊಂಡಿದ್ದರು. ಆದ್ದರಿಂದ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತ್ ಅವರು ಅವಿರೋಧವಾಗಿ ಆಯ್ಕೆಯಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡು ವಲಯದಲ್ಲಿ ಹೆಚ್ಚು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Related posts

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya
error: Content is protected !!