April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

ಬೆಳ್ತಂಗಡಿ : ಕಾಪುವಿನಲ್ಲಿ ನಡೆದ 2024ನೇ ಸಾಲಿನ ವಲಯ ಸಮ್ಮೇಳನ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಜೆಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ 2024 ನೇ ಸಾಲಿನ ಅತ್ಯುತಮ ಘಟಕಾಧ್ಯಕ್ಷ ಪ್ರಶಸ್ತಿಗೆ ಭಾಜನರಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 47ನೇ ಘಟಕಾಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಪ್ರಸ್ತಕ ವರ್ಷದಲ್ಲಿ ಹಲವಾರು ತರಬೇತಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕು ಹಾಗೂ ಜೆಸಿಐಯ ವಲಯ 15ರಲ್ಲಿ ಜೆಸಿಐ ಬೆಳ್ತಂಗಡಿಯನ್ನು ಮಿಂಚುವಂತೆ ಮಾಡಿದರು.

ವಲಯ 15ರ ವಲಯಾಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ ಯವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂರ್ವ ವಲಯಾಧ್ಯಕ್ಷರಾದ ಸಂಪತ್ ಬಿ ಸುವರ್ಣ, ವಲಯ ಕಾರ್ಯದರ್ಶಿಗಳಾದ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಪೂರ್ವಧ್ಯಕ್ಷರುಗಳಾದ ಚಿದಾನಂದ ಇಡ್ಯಾ, ಪ್ರಶಾಂತ್ ಲಾಯಿಲ, ಅಭಿನಂದನ್ ಹರೀಶ್ ಕುಮಾರ್, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿಗಳಾದ ಅನುದೀಪ್ ಜೈನ, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

Related posts

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya
error: Content is protected !!