23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!