September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya
error: Content is protected !!