22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya
error: Content is protected !!