25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya
error: Content is protected !!