September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya
error: Content is protected !!