23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ| ಫಾ| ಅಬೆಲ್ ಲೋಬೊ ರವರು ಹೇಳಿದರು.


ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಪ್ರಾಂಶುಪಾಲರಾದ ವಂ| ಫಾ| ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರಿಸಲು ವ್ಯವಸ್ಥೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪ್ರತಿನಿಧಿಗಳು ಹಾಜರಿದ್ದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ವಸ್ತುಗಳನ್ನು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಉಜಿರೆ, ಸಿಯೋನ್ ಆಶ್ರಮ ಗಂಡಿಬಾಗಿಲು, ದಯಾ ಸ್ಪೆಶಲ್ ಸ್ಕೂಲ್ ಬೆಳ್ತಂಗಡಿ, ನವಚೇತನ ಸ್ಪೆಶಲ್ ಸ್ಕೂಲ್ ವೇಣೂರು ಈ ಸಂಸ್ಥೆಗಳಿಗೆ ವಿತರಿಸಲಾಯಿತು.

Related posts

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಪುಂಜಾಲಕಟ್ಟೆ ಪುಂಡಲೀಕ ಬಾಳಿಗಾ & ಸನ್ಸ್‌ ಜ್ಯವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ವಿಶೇಷ ಮಾರಾಟ ಸೇವೆ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!