September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಎಸ್.ಪಿ.ವೈ.ಎಸ್.ಎಸ್. ಹವ್ಯಕ ಭವನ ಶಾಖೆಯಲ್ಲಿ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ಎಂಬ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ ನೆರವೇರಿತು.


ಸಂಸ್ಕಾರ, ಸಂಘಟನೆ, ಸೇವೆ ಎಂಬ ಧ್ಯೇಯದೊಂದಿಗೆ ಕರುಣಾಮಯಿ, ತ್ಯಾಗ ಮೂರ್ತಿ ಅಮ್ಮನ ಮಹತ್ವದ ಕುರಿತು ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ ಸಂಯೋಜಕ ಜಯರಾಮ ಅವರು ಪ್ರಧಾನ ಭಾಷಣಕಾರರಾಗಿ ಆಗಮಿಸಿ, ಮಾತನಾಡಿದರು.
ಮುಖ್ಯ ಅತಿಥಿಯಾಗಿ ಹೊಸನಗರ ಶ್ರೀ ರಾಮಚಂದ್ರಾಪುರ ಮಠ ಮಾತೃ ಮಂಡಳಿ ಹಾಗೂ ಹವ್ಯಕ ಭವನ ಮಾತೃ ಮಂಡಳಿಯ ಅಧ್ಯಕ್ಷೆ ದೇವಿಕಾ ಶಾಸ್ತ್ರಿ ಆಗಮಿಸಿ, ಮಕ್ಕಳಿಗೆ ತಾಯಂದಿರು ಬಾಲ್ಯದಿಂದಲೇ ಸಂಸ್ಕಾರದ ಪಾಠ ಕಲಿಸಬೇಕು ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.


ಗಾಣಿಗರ ಸಮುದಾಯ ಭವನದ ಶಾಖೆಯ ಯೋಗ ಶಿಕ್ಷಕಿ ಆಶಾ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು.
ಯೋಗ ತರಗತಿಯ ಬಂಧುಗಳು ತಾವು ಮನೆಯಲ್ಲಿ ಪ್ರಸಾದ ರೂಪದಲ್ಲಿ ತಯಾರಿಸಿ ತಂದ ವಿವಿಧ ತಿನಿಸುಗಳನ್ನು ಮಾತೆಯರು ಎಲ್ಲರಿಗೂ ನೀಡುವ ಮೂಲಕ ಮಾತೃಭೋಜನ ಕಾರ್ಯಕ್ರಮ ನಡೆಸಿಕೊಟ್ಟರು.


ಯೋಗ ಬಂಧುಗಳು ತರಗತಿಯಲ್ಲಿ ಪಡೆದ ಪ್ರಯೋಗಗಳ ಬಗ್ಗೆ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ತಾಯಿಯ ಮಹತ್ವವನ್ನು ಅರ್ಥೈಸುವ ಉದ್ದೇಶವನ್ನು ಇಟ್ಟುಕೊಂಡು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ತಾಲೂಕು ಸಂಚಾಲಕ ಸಂತೋಷ್ ಹಾಗು ವಿವಿಧ ಶಾಖೆಗಳ ಶಿಕ್ಷಕರು, ಹಾಗೂ 190 ಮಂದಿ ಯೋಗ ಹಾಗೂ ಯೋಗೇತರ ಬಂಧುಗಳು ಪಾಲ್ಗೊಂಡಿದ್ದರು.


ಯೋಗ ಶಿಕ್ಷಕರಾದ ಪ್ರದೀಪ್, ಆನಂದ್ ಹಾಗು ಪ್ರೇಮಲತಾ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಸಂಯೋಜಿಸಲಾಗಿತ್ತು.
ದಯಾನಂದ ವಂದೇಮಾತರಂ ಗೀತೆ ಹಾಡಿದರು. ಬ್ರಾಹ್ಮೀ ಅವರು ವೈಯುಕ್ತಿಕ ಗೀತೆ ಹಾಡಿದರು. ದಮಯಂತಿ ಸ್ವಾಗತಿಸಿ, ಪೂರ್ಣಿಮಾ ವರದಿ ವಾಚಿಸಿದರು. ಜಯಂತಿ ಏಕನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸುಮಲತಾ ವಂದಿಸಿದರು.

Related posts

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!