22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ : ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಕುಮಾರಧಾರ ನದಿಯಲ್ಲಿ ಹರಿದು ಬಂದು ಭಕ್ತಾದಿಗಳ ಸ್ನಾನಘಟ್ಟ ಬಳಿಯ ವೆಂಟೆಡ್ ಡ್ಯಾಮ್ ಬಳಿ ಮರ, ಕಸ, ಕಡ್ಡಿ, ಕಲ್ಲು ,ಸೇರಿಕೊಂಡು ನೀರು ಶೇಖರಣೆಗೊಂಡು ಮಲಿನಗೊಂಡಿತ್ತು. ಇದನ್ನು ಮನಗಂಡ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ನ ಸುಮಾರು 40 ಸ್ವಯಂಸೇವಕರು ಟ್ರಸ್ಟ್ ನ ಸಂಸ್ಥಾಪಕ ಡಾl ರವಿಕಕ್ಕೆಪದವು ಅವರ ನೇತೃತ್ವದಲ್ಲಿ ಅ.27 ರಂದು ವೆಂಟೆಡ್ ಡ್ಯಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಎಲ್ಲಾ ತರದ ಬೃಹದಾಕಾರದ ದಿಮ್ಮಿಗಳು, ಪ್ಲಾಸ್ಟಿಕ್, ಬಟ್ಟೆ, ಇತ್ಯಾದಿಗಳನ್ನ ತೆಗೆದು ಸ್ವಚ್ಛಗೊಳಿಸಲಾಯಿತು. ಇದರಿಂದಾಗಿ ನದಿಯಲ್ಲಿ ನೀರು ಸರಾಗವಾಗಿ ಹರಿದು ಭಕ್ತಾದಿಗಳು ತೀರ್ಥ ಸ್ನಾನ ಮಾಡುವ ಸ್ನಾನ ಗಟ್ಟದಲ್ಲಿ ಯಾವುದೇ ಮಲಿನ ನೀರು ಇಲ್ಲದಂತಾಗಿದೆ.


ಈ ಬಗ್ಗೆ ಡಾlರವಿ ಕಕ್ಕೆಪದವು ಮಾತನಾಡಿ ನಾವು ಪ್ರತಿ ರವಿವಾರ ಸ್ವಚ್ಛತಾ ಕಾರ್ಯವನ್ನು ಮಾಡುತ್ತಾ ಬಂದಿದ್ದೇವೆ. ಇದರಿಂದಾಗಿ ಶ್ರೀ ಕ್ಷೇತ್ರಕ್ಕೆ ಬರುವ ಸಾವಿರಾರು ಭಕ್ತಾದಿಗಳಿಗೆ ತೀರ್ಥ ಸ್ನಾನ ಮಾಡಲು ಯಾವುದೇ ಅಡೆತಡೆ ಇಲ್ಲದಾಗಿದೆ ,ಹಾಗೂ ವಾಹನ ಪಾರ್ಕಿಂಗ್ ಸ್ಥಳ ರಸ್ತೆಯ ಇಕ್ಕಲಗಳಲ್ಲಿ ಇರುವಂತ ಕಸ ಕಡ್ಡಿಗಳು ,ತ್ಯಾಜ್ಯ ವಸ್ತುಗಳನ್ನ ಸ್ವಚ್ಛಗೊಳಿಸಿ, ವಾಹನಗಳ ಪಾರ್ಕಿಂಗ್ ಹಾಗೂ ನಡೆದಾಡಲು ಅನುವು ಮಾಡಿಕೊಡಲಾಗಿದೆ. ಈ ರೀತಿಯಾಗಿ ಎಲ್ಲಾ ಕಡೆಗಳಲ್ಲಿ ಜನರು ತಮ್ಮ ತಮ್ಮ ಪ್ರದೇಶ ಪರಿಸರಗಳಲ್ಲಿ ಸ್ವಚ್ಛತಾ ಕಾರ್ಯವನ್ನ ಕೈಗೊಂಡಲ್ಲಿ ಸ್ವಸ್ಥ ಆರೋಗ್ಯದೊಂದಿಗೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದವರು ತಿಳಿಸಿದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya
error: Content is protected !!