September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

ತಣ್ಣೀರುಪಂತ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಬೆಳ್ತಂಗಡಿ ತಾಲೂಕು ಪಂಚಾಯತ್, ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ತಣ್ಣೀರುಪಂತದ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸಂಜೀವಿನಿ ಮಾಸಿಕ ಸಂತೆ ದೀಪ ಸಂಜೀವಿನಿ ಸಂತೆ ಅ.29ರಂದು ತಣ್ಣೀರುಪಂತ ಗ್ರಾ.ಪಂ.ವಠಾರದಲ್ಲಿ ನಡೆಯಿತು.

ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ಒಕ್ಕೂಟಕ್ಕೆ ಸೇರಿ, ರಾಸಾಯನಿಕ ರಹಿತವಾದ, ತರಕಾರಿಯನ್ನು ಬೆಳೆದು ಹಾಗೂ ಖಾದ್ಯ ಉತ್ಪನ್ನಗಳನ್ನು ಸ್ವತಃ ತಾವೇ ತಯಾರಿಸುತ್ತಿರುವುದು ಪ್ರಶಕ್ತ ಸಮಾಜಕ್ಕೆ ಪ್ರೇರಣದಾಯಕ ಕಾರ್ಯವನ್ನು ಸಂಜೀವಿನಿ ಒಕ್ಕೂಟ ಮಾಡುತ್ತಿರುವುದು ಅಭಿನಂದನೀಯ. ಹಣತೆಯನ್ನು ಖರೀದಿಸುವುದರ ಮೂಲಕ ದೀಪಾವಳಿಯಂದು ಅಂಧಕಾರವನ್ನು ಕಳೆದು ಜ್ಞಾನದ ಜ್ಯೋತಿಯನ್ನು ನಮ್ಮ ಮನೆ ಮನದಲ್ಲಿ ಪಸರಿಸುತ್ತದೆ. ದೀಪಗಳು ಈ ಹಬ್ಬದ ಸಮಯದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿಕೊಳ್ಳುತ್ತದೆ ಎಂದು ಹೇಳಿದರು.

ಪಿಡಿಓ ಶ್ರವಣ್ ಕುಮಾರ್ ಮಾತನಾಡಿ, ಸುಗಮ ಸಂಜೀವಿನಿ ಒಕ್ಕೂಟ ಗ್ರಾಮ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವಿವಿಧ ಸಂಜೀವಿನಿ ಒಕ್ಕೂಟದ ಸದಸ್ಯರು ತಾವೇ ಖುದ್ದಾಗಿ ಹತ್ತಾರು ಉತ್ಪನ್ನಗಳನ್ನು ತಯಾರಿಸಿದ್ದಾರೆ. ಸಾವಯವ ಕೃಷಿ ಪದ್ಧತಿಗೆ ಆದ್ಯತೆ ನೀಡಿ ಗ್ರಾಮೀಣ ಭಾಗದಲ್ಲಿ ಮಹಿಳೆಯರು ತರಕಾರಿಗಳನ್ನು ಬೆಳೆದು ಸಂತೆಯಲ್ಲಿ ಮಾರಾಟ ನಡೆಸುತ್ತಿದ್ದು ಪ್ರತೀ ತಿಂಗಳು ಗ್ರಾಮದಲ್ಲಿ ಮಾಸಿಕ ಸಂತೆ ನಡೆಯಲಿ ಎಂದು ಅಭಿಪ್ರಾಯಪಟ್ಟರು.

ವಿವಿಧ ಬಗೆಯ ಉತ್ಪನ್ನ:
ಸಂತೆಯಲ್ಲಿ ತಣ್ಣೀರುಪಂತ, ಕಣಿಯೂರು, ಬಾರ್ಯ, ಮಚ್ಚಿನ, ಕಳಿಯ, ಚಾರ್ಮಾಡಿ, ಕುಕ್ಕೇಡಿ ಹಾಗೂ ಮಾಲಾಡಿಯ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು. ಓಲೆಬೆಲ್ಲಕ್ಕೆ ವ್ಯಾಪಕ ಬೇಡಿಕೆ ಇತ್ತು. ಇನ್ನೂ ಉಳಿದಿದ್ದಂತೆ ಹಣತೆ, ತಂಪುಪಾನೀಯ, ತರಕಾರಿ, ಚಕ್ಕುಲಿ, ಉಪ್ಪಿನಕಾಯಿ, ಮಸಾಲೆ ಹುಡಿ, ಹೋಳಿಗೆ, ಫಿನಾಯಿಲ್, ಸಾಬೂನು ಹಾಗೂ ಧಾನ್ಯಗಳನ್ನು ಮಾರಟ ಮಾಡಿದ್ದು ರೂ.10 ಸಾವಿರದ ವರೆಗೆ ಲಾಭ ಗಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಎಂ.ಹಾಗೂ ತಣ್ಣೀರುಪಂತ ಪ್ಯಾಕ್ಸ್ ಸಿಇಒ ಸುರೇಂದ್ರ ಪ್ರಸಾದ್ ಶುಭಾ ಹಾರೈಸಿದರು. ಕಲ್ಲೇರಿ ಮೆಸ್ಕಾಂ ಶಾಖೆಯ ಜೆಇ ಬೂಬ ಶೆಟ್ಟಿ, ಕಾರ್ಯದರ್ಶಿ ಆನಂದ ಹಾಗೂ ಒಕ್ಕೂಟದ ಅಧ್ಯಕ್ಷೆ ಸವಿತಾ ಉಪಸ್ಥಿತರಿದ್ದರು. ತಾಲೂಕು ವ್ಯವಸ್ಥಾಪಕ ಕೃಷಿಯೇತರ ನಿತೀಶ್, ವಲಯ ಮೇಲ್ವಿಚಾರಕಾರದ ಜಯಾನಂದ ಕನ್ನಾಜೆ, ವೀಣಾಶ್ರೀ ಕೊಕ್ಕಡ, ತಣ್ಣೀರುಪಂತ ಗ್ರಾ.ಪಂ.ಸಿಬ್ಬAದಿಗಳಾದ ಸುಂದರ, ಪ್ರಸಾದ್, ಸಂಗೀತಾ ಹಾಗೂ ಸುಧಾ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ವಲಯ ಮೇಲ್ವಿಚಾರಕ ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya
error: Content is protected !!