23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು ಇವರಿಗೆ ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿ ವತಿಯಿಂದ ಧರ್ಮಸ್ಥಳ ಕೃಷಿ ಪ್ತತಿನ ಸಹಕಾರಿ ಸಂಘದ ಅಟಲ್ ಜೀ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭವು ನಡೆಯಿತು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ವಿಮಲಾ ಪರಮೇಶ್ವರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮೂಡಬಿದಿರೆ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಕಿಶೋರ್ ಪಿ., ವೀರು ಶೆಟ್ಟಿ ಧರ್ಮಸ್ಥಳ, ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಮ್ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಗ್ರಾಪಂ. ವತಿಯಿಂದ, ಧರ್ಮಸ್ಥಳ ಕ್ಷೇತ್ರದಿಂದ, ಅಭಿಮಾನಿಗಳಿಂದ, ಗ್ರಾ.ಪಂ. ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಲಾಯಿತು. .

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಇಲಾಖಾ ಅಧಿಕಾರಿಗಳು, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಧ.ಮಂ. ಪ್ರೌಢ ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಪಂ.ಅ. ಅಧಿಕಾರಿ ದಿನೇಶ್ ಸ್ವಾಗತಿಸಿದರು. ಚಂದ್ರಹಾಸ ಕೋಟ್ಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಕ ಮಾತನಾಡಿದರು.



Related posts

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya
error: Content is protected !!