August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹದಲ್ಲಿ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!