25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya
error: Content is protected !!