23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿಗಳಾದ ಸಂದೀಪ್ ರಾವ್ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ಸರ್ವೋತಮುಖ ಏಳಿಗೆಯೊಂದಿಗೆ ನೆಮ್ಮದಿಯ ಜೀವನವನ್ನು ಕಂಡುಕೊಳ್ಳಲು ಸಾಧ್ಯ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಎನ್ ಕೆ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದರು.


ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕರಾದ ಮಹಾಬಲ ಗೌಡ ಧನ್ಯವಾದವಿತ್ತರು. ಶ್ರೀಮತಿ ಪ್ರಜ್ವಲ ಡಿ ಆರ್ ಕಾರ್ಯಕ್ರಮ ನಿರೂಪಿಸಿದರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya
error: Content is protected !!