25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

ಉಜಿರೆ: ದೇಶದ ಪ್ರತಿಷ್ಠಿತ ಯುಜಿಸಿಯು ನ್ಯಾಕ್ ಸಂಸ್ಥೆ ಮೂಲಕ ನಡೆಸುವ ಗುಣಮಟ್ಟ ಪರೀಕ್ಷೆಯಲ್ಲಿ ಸತತ ನಾಲ್ಕು ಬಾರಿ ಎ++ ಮಾನ್ಯತೆಯೊಂದಿಗೆ ರಾಜ್ಯದ, ದೇಶದ ಹಲವು ಪ್ರಶಸ್ತಿ, ಗೌರವಕ್ಕೆ ಭಾಜನವಾಗಿರುವ ಉಜಿರೆಯ ಎಸ್‌ಡಿಎಂ ಕಾಲೇಜಿಗೆ ಇನ್ನೆರಡು ಪ್ರಶಸ್ತಿಗಳು ಲಭಿಸಿವೆ.

ರಾಷ್ಟ್ರಮಟ್ಟದ ಬಿಗಿನಪ್ ರಿಸರ್ಚ್ ಇಂಟಲಿಜೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಉಜಿರೆ ಎಸ್‌ಡಿಎಂ ಕಾಲೇಜನ್ನು ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಅತ್ಯುತ್ತಮ ಆಡಳಿತ, ಗುಣಾತ್ಮಕ ಶಿಕ್ಷಣ ಹಾಗೂ ಸಾಮಾಜಿಕ ಕೊಡುಗೆಗೆ ನೀಡಲಾಗುವ ಪ್ರಶಸ್ತಿಗೆ ಕಾಲೇಜನ್ನು ಆಯ್ಕೆ ಮಾಡಿದೆ. ಜತೆಗೆ, ಶೈಕ್ಷಣಿಕ ಗುಣಮಟ್ಟದಲ್ಲಿ ಉತ್ಕೃಷ್ಟತೆ ಹಾಗೂ ಅದರ ಪರಿಣಾಮಕಾರಿ ಅಳವಡಿಕೆ ಅನುಷ್ಠಾನ ವಿಭಾಗದಲ್ಲಿಯೂ ಕಾಲೇಜನ್ನು ಪ್ರಶಸ್ತಿಗೆ ಪರಿಗಣಿಸಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಇಂಡಿಯಾ ಇಲೈಟ್ ಎಜುಕೇಶನ್ ಆ್ಯಂಡ್ ಇನ್‌ಸ್ಟಿಟ್ಯೂಷನಲ್ ಎಕ್ಸೆಲೆನ್ಸ್ ಅವಾರ್ಡ್ಸ್ ಆ್ಯಂಡ್ ಕಾನ್ಸರೆನ್ಸ್ 2024′ ಸಮಾರಂಭದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಬಿ.ಎ.ಕುಮಾರ ಹೆಗ್ಡೆ ಹಾಗೂ ವೈಸ್ ಪ್ರಿನ್ಸಿಪಾಲ್ ಎಸ್.ಎನ್‌. ಕಾಕತ್ಕರ್ ಪ್ರಶಸ್ತಿ ಸ್ವೀಕರಿಸಿದರು.

Related posts

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya
error: Content is protected !!