37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಕಾಮಗಾರಿಗಳ ಬಿಲ್ಲನ್ನು ಪಾವತಿಸುವಂತೆ ಒತ್ತಾಯಿಸಿ, ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆ ವತಿಯಿಂದ ತಾಲೂಕಿನಾದ್ಯಂತ ಇಲಾಖೆಗೆ ಸೇರಿದ ರಸ್ತೆಗಳ ನಿರ್ವಹಣೆ, ಸೇತುವೆಗಳ ರಚನೆ, ರಸ್ತೆ ಡಾಮರೀಕರಣ, ರಸ್ತೆ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರರು ನಿರ್ವಹಿಸುತ್ತಾರೆ. ಆದರೆ ಇವರಿಗೆ ಕಾಮಗಾರಿ ನಿರ್ವಹಿಸಿದ ಹಣ ಸರಕಾರದಿಂದ ಸರಿಯಾದ ಸಮಯಕ್ಕೆ ಬಿಡುಗಡೆಯಾಗುತ್ತಿಲ್ಲ. ಹಣಕ್ಕಾಗಿ ಅಲೆದಾಟ, ವರ್ಷಗಟ್ಟೆಲೆ ಕಾಯಬೇಕಾಗುತ್ತದೆ. ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಈಗಾಗಲೇ ಮಾಡಿರುವ ಕಾಮಗಾರಿಯಲ್ಲಿ ಗುತ್ತಿಗೆದಾರರಿಗೆ ಸುಮಾರು ೫೦ ಕೋಟಿಯಷ್ಟು ಅನುದಾನ ಬಿಡುಗಡೆಗೆ ಬಾಕಿಯಾಗಿದೆ.

ಗುತ್ತಿಗೆದಾರರು ಕೆಲಸ ನಿರ್ವಹಿಸಿದರೂ ಸರಕಾರದಿಂದ ಹಣ ಬಿಡುಗಡೆಯಾಗದಿರುವುದರಿಂದ ಗುತ್ತಿಗೆದಾರರು ಬಹಳಷ್ಟು ಸಂಕಷ್ಟವನ್ನು ಅನುಭವಿಸಬೇಕಾಗಿದೆ. ಕೆಲಸವೂ ಇಲ್ಲದೆ, ಹಣವೂ ಬಿಡುಗಡೆಯಾಗದೆ ಜೀವನ ನಿರ್ವಹಣೆಗೆ ಬವಣೆ ಪಡುವ ಸ್ಥಿತಿಯಾಗಿದೆ. ಹಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದರೂ, ಇಂದು, ನಾಳೆ ಎಂಬ ಕುಂಟು ನೆಪವನ್ನು ಒಡ್ಡಿ ಗುತ್ತಿಗೆದಾರರನ್ನು ಸಮಾಧಾನ ಪಡಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆಯೇ ಹೊರತು ಯಾವುದೇ ಫಲ ನೀಡಿಲ್ಲ.
ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಧರಣಿ ಸತ್ಯಾಗ್ರಹ ನಡೆಸಿದರು. ಗುತ್ತಿಗೆದಾರರಾದ ರಾಜಶೇಖರ್ ಅಂಡಿಂಜೆ, ಅನಿಲ್ ಬೆಳ್ತಂಗಡಿ, ದಿಶಾಂತ್ ಬೆಳ್ತಂಗಡಿ, ದಯಾನಂದ ಬೆಳ್ತಂಗಡಿ, ಸಹದೇವ್, ಬದ್ರುದ್ದೀನ್, ಸಂಯುಕ್ತ್ ಕಡ್ತಿಲ ಮೊದಲಾದವರು ಕಚೇರಿಯ ಎದುರು ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ಇಂಜಿನಿಯರ್ ಅಮರನಾಥ್ ಜೈನ್ ಅವರು ಪ್ರತಿಭಟನಾ ನಿರತರೊಡನೆ ಮಾತುಕತೆ ನಡೆಸಿ, ತಾನು ಬೆಳ್ತಂಗಡಿ ಉಪ ವಿಭಾಗಕ್ಕೆ ಭೇಟಿ ನೀಡಿ ಎಲ್ಲಾ ಗುತ್ತಿಗೆದಾರರ ಜೊತೆ ಮಾತುಕತೆ ನಡೆಸುತ್ತೇನೆ. ಈಗಾಗಲೇ ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ. ಒಂದು ತಿಂಗಳ ಒಳಗೆ ಬಾಕಿ ಹಣವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ನಂತರ ಧರಣಿಯನ್ನು ಹಿಂತೆಗೆದುಕೊಳ್ಳಲಾಯಿತು.

Related posts

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!