April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ನಡೆದ ಕಾಮಗಾರಿಗಳ ಬಿಲ್ಲನ್ನು ಪಾವತಿಸುವಂತೆ ಒತ್ತಾಯಿಸಿ, ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖೆ ವತಿಯಿಂದ ತಾಲೂಕಿನಾದ್ಯಂತ ಇಲಾಖೆಗೆ ಸೇರಿದ ರಸ್ತೆಗಳ ನಿರ್ವಹಣೆ, ಸೇತುವೆಗಳ ರಚನೆ, ರಸ್ತೆ ಡಾಮರೀಕರಣ, ರಸ್ತೆ ದುರಸ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರರು ನಿರ್ವಹಿಸುತ್ತಾರೆ. ಆದರೆ ಇವರಿಗೆ ಕಾಮಗಾರಿ ನಿರ್ವಹಿಸಿದ ಹಣ ಸರಕಾರದಿಂದ ಸರಿಯಾದ ಸಮಯಕ್ಕೆ ಬಿಡುಗಡೆಯಾಗುತ್ತಿಲ್ಲ. ಹಣಕ್ಕಾಗಿ ಅಲೆದಾಟ, ವರ್ಷಗಟ್ಟೆಲೆ ಕಾಯಬೇಕಾಗುತ್ತದೆ. ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಈಗಾಗಲೇ ಮಾಡಿರುವ ಕಾಮಗಾರಿಯಲ್ಲಿ ಗುತ್ತಿಗೆದಾರರಿಗೆ ಸುಮಾರು ೫೦ ಕೋಟಿಯಷ್ಟು ಅನುದಾನ ಬಿಡುಗಡೆಗೆ ಬಾಕಿಯಾಗಿದೆ.

ಗುತ್ತಿಗೆದಾರರು ಕೆಲಸ ನಿರ್ವಹಿಸಿದರೂ ಸರಕಾರದಿಂದ ಹಣ ಬಿಡುಗಡೆಯಾಗದಿರುವುದರಿಂದ ಗುತ್ತಿಗೆದಾರರು ಬಹಳಷ್ಟು ಸಂಕಷ್ಟವನ್ನು ಅನುಭವಿಸಬೇಕಾಗಿದೆ. ಕೆಲಸವೂ ಇಲ್ಲದೆ, ಹಣವೂ ಬಿಡುಗಡೆಯಾಗದೆ ಜೀವನ ನಿರ್ವಹಣೆಗೆ ಬವಣೆ ಪಡುವ ಸ್ಥಿತಿಯಾಗಿದೆ. ಹಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದರೂ, ಇಂದು, ನಾಳೆ ಎಂಬ ಕುಂಟು ನೆಪವನ್ನು ಒಡ್ಡಿ ಗುತ್ತಿಗೆದಾರರನ್ನು ಸಮಾಧಾನ ಪಡಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆಯೇ ಹೊರತು ಯಾವುದೇ ಫಲ ನೀಡಿಲ್ಲ.
ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಲೋಕೋಪಯೋಗಿ ಇಲಾಖೆಯ ಕೆಲ ಗುತ್ತಿಗೆದಾರರು ಅ.29ರಂದು ಮಂಗಳೂರು ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಧರಣಿ ಸತ್ಯಾಗ್ರಹ ನಡೆಸಿದರು. ಗುತ್ತಿಗೆದಾರರಾದ ರಾಜಶೇಖರ್ ಅಂಡಿಂಜೆ, ಅನಿಲ್ ಬೆಳ್ತಂಗಡಿ, ದಿಶಾಂತ್ ಬೆಳ್ತಂಗಡಿ, ದಯಾನಂದ ಬೆಳ್ತಂಗಡಿ, ಸಹದೇವ್, ಬದ್ರುದ್ದೀನ್, ಸಂಯುಕ್ತ್ ಕಡ್ತಿಲ ಮೊದಲಾದವರು ಕಚೇರಿಯ ಎದುರು ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ವಿಭಾಗೀಯ ಇಂಜಿನಿಯರ್ ಅಮರನಾಥ್ ಜೈನ್ ಅವರು ಪ್ರತಿಭಟನಾ ನಿರತರೊಡನೆ ಮಾತುಕತೆ ನಡೆಸಿ, ತಾನು ಬೆಳ್ತಂಗಡಿ ಉಪ ವಿಭಾಗಕ್ಕೆ ಭೇಟಿ ನೀಡಿ ಎಲ್ಲಾ ಗುತ್ತಿಗೆದಾರರ ಜೊತೆ ಮಾತುಕತೆ ನಡೆಸುತ್ತೇನೆ. ಈಗಾಗಲೇ ಸಂಬಂಧಿಸಿದ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ. ಒಂದು ತಿಂಗಳ ಒಳಗೆ ಬಾಕಿ ಹಣವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ನಂತರ ಧರಣಿಯನ್ನು ಹಿಂತೆಗೆದುಕೊಳ್ಳಲಾಯಿತು.

Related posts

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya
error: Content is protected !!