30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡ, ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಣಿತ ಭಜನೆ, ಗೋಪೂಜೆ, ಸುಡುಮದ್ದು ಪ್ರದರ್ಶನದೊಂದಿಗೆ ಸಂಭ್ರಮ- ಸಡಗರದಿಂದ ಕಾರ್ಯಕ್ರಮ ನಡೆಯಲಿದೆ.


ವಿಶೇಷ ಆಕರ್ಷಣೆ: ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- ೨೦೨೪, ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya
error: Content is protected !!