April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡ, ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಣಿತ ಭಜನೆ, ಗೋಪೂಜೆ, ಸುಡುಮದ್ದು ಪ್ರದರ್ಶನದೊಂದಿಗೆ ಸಂಭ್ರಮ- ಸಡಗರದಿಂದ ಕಾರ್ಯಕ್ರಮ ನಡೆಯಲಿದೆ.


ವಿಶೇಷ ಆಕರ್ಷಣೆ: ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- ೨೦೨೪, ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!