25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡ, ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಣಿತ ಭಜನೆ, ಗೋಪೂಜೆ, ಸುಡುಮದ್ದು ಪ್ರದರ್ಶನದೊಂದಿಗೆ ಸಂಭ್ರಮ- ಸಡಗರದಿಂದ ಕಾರ್ಯಕ್ರಮ ನಡೆಯಲಿದೆ.


ವಿಶೇಷ ಆಕರ್ಷಣೆ: ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- ೨೦೨೪, ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya
error: Content is protected !!