37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya
error: Content is protected !!