August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

ಬೆಳ್ತಂಗಡಿ: ದಿ ಕ್ಯಾಂಪ್ಕೋ ಲಿ.ಮಂಗಳೂರು ಬೆಳ್ತಂಗಡಿ ಶಾಖೆ ಇದರ ಅಡಿಕೆ ಮತ್ತು ಕಾಳುಮೆಣಸು ಖರೀದಿಯ ಉಪಕೇಂದ್ರವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ ಇದರ ಬರೆಂಗಾಯದಲ್ಲಿ ಅ.29 ರಂದು ಆರಂಭಿಸಲಾಯಿತು.

ಖರೀದಿ ಕೇಂದ್ರವನ್ನು ಕ್ಯಾಂಪ್ಕೋ ಮಂಗಳೂರು ಇದರ ಮಾರುಕಟ್ಟೆ ವಿಭಾಗದ ಡಿಜಿಎಂ ಗೋವಿಂದ ಭಟ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ಯಾಂಪ್ಕೋ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ ಇ. ನಿಡ್ಲೆ ಪ್ಯಾಕ್ಸ್ ನ ಅಧ್ಯಕ್ಷ ರಮೇಶ್ ರಾವ್, ಬೆಳ್ತಂಗಡಿ ಕ್ಯಾಂಪ್ಕೋ ಪ್ರಬಂಧಕರಾದ ಕೃಷ್ಣ ಕೆ.ಎಸ್ ಉಪಸ್ಥಿತರಿದ್ದರು. ಕ್ಯಾಂಪ್ಕೋ ಸದಸ್ಯ ಬೆಳೆಗಾರರು. ಕ್ಯಾಂಪ್ಕೋ ಮತ್ತು ನಿಡ್ಲೆ ಪ್ಯಾಕ್ಸ್ ನ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತೀ ಮಂಗಳವಾರದಂದು ಇಲ್ಲಿ ಅಡಿಕೆ ಮತ್ತು ಕಾಳು ಮೆಣಸನ್ನು ಖರೀದಿಸಲಾಗುವುದು ಮತ್ತು ಇದರ ಪ್ರಯೋಜನವನ್ನು ಎಲ್ಲಾ ಬೆಳೆಗಾರರು ಪಡೆದುಕೊಳ್ಳಬೇಕೆಂದು ಕ್ಯಾಂಪ್ಕೋದ ಪ್ರಕಟಣೆಯಲ್ಲಿ ಕೋರಲಾಗಿದೆ

Related posts

ಮಡಿಕೇರಿಯ ಪ್ರಕೃತಿ ಮಡಿಲಲ್ಲಿ ಬೆಳ್ತಂಗಡಿ ಹೆರಾಜೆ ಕುಟುಂಬದ ಸಂಭ್ರಮದ ಕುಟುಂಬ ಮಿಲನ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!