34.3 C
ಪುತ್ತೂರು, ಬೆಳ್ತಂಗಡಿ
March 29, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ಬಳಂಜ ಇದರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪದಕಗಳನ್ನು ಗೆದ್ದಿರುತ್ತಾರೆ.

ಪ್ರಾಥಮಿಕ ಬಾಲಕರು ಹಾಗೂ 14 ವಯೋಮಾನದ ಬಾಲಕರು ಎರಡು ವಿಭಾಗಗಳಲ್ಲಿ ಸಮಗ್ರ ಪ್ರಶಸ್ತಿ ಪಡೆದಿರುತ್ತಾರೆ. 19 ಪದಕಗಳೊಂದಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಅಫ್ಜಲ್, ಶ್ರೇಯಸ್, ರೌಶನ್ ಪ್ರಾಥಮಿಕ ವಿಭಾಗದಲ್ಲಿ ಸ್ವರ್ಣಿತ್, ಸ್ವರೂಪ್, ಅಖಿಲ್, ಶ್ರೇಯ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕರಾದ ವಸಂತ ಹೆಗ್ಡೆ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ. ವಿಜೇತರನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!