July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ಪಿಡಿಒ ಉಮೇಶ್ ಕೆ. ಸೇವಾ ನಿವೃತ್ತಿ: ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿಯಿಂದ ಬೀಳ್ಕೊಡುಗೆ

ಧರ್ಮಸ್ಥಳ: ಸುಮಾರು 37ವರ್ಷದಿಂದ ವಿವಿಧ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿ ಮತ್ತು ಇದೀಗ ಧರ್ಮಸ್ಥಳ ಗ್ರಾ.ಪಂ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಕೆ ರವರು ಅ.30ರಂದು ಸೇವಾ ನಿವೃತ್ತಿ ಹೊಂದಿದ್ದು ಇವರಿಗೆ ಧರ್ಮಸ್ಥಳ ಬೀಳ್ಕೊಡುಗೆ ಸಮಾರಂಭ ಸಮಿತಿ ವತಿಯಿಂದ ಧರ್ಮಸ್ಥಳ ಕೃಷಿ ಪ್ತತಿನ ಸಹಕಾರಿ ಸಂಘದ ಅಟಲ್ ಜೀ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭವು ನಡೆಯಿತು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷ ಶ್ರೀಮತಿ ವಿಮಲಾ ಪರಮೇಶ್ವರ್, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಮೂಡಬಿದಿರೆ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಕಿಶೋರ್ ಪಿ., ವೀರು ಶೆಟ್ಟಿ ಧರ್ಮಸ್ಥಳ, ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಮ್ ಉಪಸ್ಥಿತರಿದ್ದರು.

ಈ ವೇಳೆ ಧರ್ಮಸ್ಥಳ ಗ್ರಾಪಂ. ವತಿಯಿಂದ, ಧರ್ಮಸ್ಥಳ ಕ್ಷೇತ್ರದಿಂದ, ಅಭಿಮಾನಿಗಳಿಂದ, ಗ್ರಾ.ಪಂ. ಸಿಬ್ಬಂದಿಗಳ ವತಿಯಿಂದ ಸನ್ಮಾನಿಸಲಾಯಿತು. .

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಇಲಾಖಾ ಅಧಿಕಾರಿಗಳು, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀ ಧ.ಮಂ. ಪ್ರೌಢ ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಪಂ.ಅ. ಅಧಿಕಾರಿ ದಿನೇಶ್ ಸ್ವಾಗತಿಸಿದರು. ಚಂದ್ರಹಾಸ ಕೋಟ್ಯಾನ್ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಪ್ರಸ್ತಾವಿಕ ಮಾತನಾಡಿದರು.



Related posts

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya
error: Content is protected !!