July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

ಬೆಳ್ತಂಗಡಿ: ಅ.31ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಹಿಂದೂ ಸಂಘಟನೆ ಮುಖಂಡ, ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಬಿಜೆಪಿ ಯುವಮೋರ್ಚಾದ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಣಿತ ಭಜನೆ, ಗೋಪೂಜೆ, ಸುಡುಮದ್ದು ಪ್ರದರ್ಶನದೊಂದಿಗೆ ಸಂಭ್ರಮ- ಸಡಗರದಿಂದ ಕಾರ್ಯಕ್ರಮ ನಡೆಯಲಿದೆ.


ವಿಶೇಷ ಆಕರ್ಷಣೆ: ಬೆಳಿಗ್ಗೆಯಿಂದ ನಿರಂತರ ದೋಸೆ, ಕುಣಿತಾ ಭಜನೆ, ಹಣತೆ ಹಚ್ಚಿ ದೀಪಾವಳಿ ಆಚರಣೆ, ಗೋಪೂಜೆ ಉತ್ಸವ, ಸುಡುಮದ್ದು ಪ್ರದರ್ಶನ, ಭಜನೆ, ನಗರ ದೀಪಾಲಂಕಾರ, ಧಾರ್ಮಿಕ ಸಭಾ ಕಾರ್ಯಕ್ರಮ,ತೆಳಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ವಾಮಂಜೂರು, ಸಾಯಿ ಅಭಿನಯದ ತುಳು ಹಾಸ್ಯಮಯ ನಾಟಕ ಏರ್ಲಾ ಗ್ಯಾರಂಟಿ ಅತ್ತ್, ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ- ೨೦೨೪, ಸರಿಗಮಪ ಖ್ಯಾತಿಯ ಕ್ಷಿತಿ ಕೆ. ರೈ ಹಾಗೂ ಅನ್ವಿತ್ ಕೊಡಗು ಇವರಿಂದ ಗಾನ ವೈಭವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿದೆ.

Related posts

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!